Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಗಾಯಾಳುಗಳ ತುರ್ತು ಚಿಕಿತ್ಸೆಗೆ ಸಹಕರಿಸಿ ಮಾನವೀಯತೆ ಮೆರೆದ ಸಂಸದರು

ಸಂಸದ ನಳಿನ್ ಕುಮಾರ್ ಕಟೀಲ್ ರವರು ಇಂದು (04-09-2017) ಕಾರ್ಯಕ್ರಮದ ನಿಮಿತ್ತ ಕೊಟ್ಟಾರ ಕಡೆಗೆ ಸಂಚರಿಸುತ್ತಿದ್ದಾಗ ಉರ್ವಾ ಮೈದಾನದ ಬಳಿ ನಿಯಂತ್ರಣ ತಪ್ಪಿದ ರಿಕ್ಷಾವೊಂದು ಪಲ್ಟಿಯಾಗಿರುವುದನ್ನು ಗಮನಿಸಿ ತಕ್ಷಣ ತನ್ನ ವಾಹನವನ್ನು ನಿಲ್ಲಿಸಿ ಗಾಯಗೊಂಡ ರಿಕ್ಷಾ ಚಾಲಕ ಗಂಗಾಧರ ಹಾಗೂ ಪ್ರಯಾಣಿಕರಾದ ಶ್ರೀಮತಿ ನಾಯಕ್ ಇವರನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು ಹಾಗೂ ದೂರವಾಣಿ ಮೂಲಕ ಆಸ್ಪತ್ರೆಯವರನ್ನು ಸಂಪರ್ಕಿಸಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಕೊಡಿಸುವಂತೆ ಸೂಚಿಸಿದರು. ಸಂಸದರ ಈ ನಡೆ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಯಿತು.

Highslide for Wordpress Plugin