Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಾನ್ಯ ಕೇಂದ್ರ ಹಣಕಾಸು ಸಚಿವರಾದ ಶ್ರೀ.ಅರುಣ್ ಜೇಟ್ಲಿ ಅರಿಗೆ ಮನವಿ

ದಕ್ಷಿಣ ಕನ್ನಡ ಸಂಸದ ಶ್ರೀ. ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಕು.ಶೋಭಾ ಕರಂದ್ಲಾಜೆ ಹಾಗೂ ಮುಂಬೈ ಸಂಸದ ಶ್ರೀ.ಗೋಪಾಲ ಶೆಟ್ಟಿ ಇವರನ್ನೊಂಳಗೊಂಡ ನಿಯೋಗವು ಇಂದು ಮಾನ್ಯ ಕೇಂದ್ರ ಹಣಕಾಸು ಸಚಿವರಾದ ಶ್ರೀ.ಅರುಣ್ ಜೇಟ್ಲಿ ಇವರನ್ನು ಭೇಟಿ ಮಾಡಿ ಜಿಲ್ಲೆಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ನ್ನು ಬ್ಯಾಂಕ್ ಆಫ್ ಬರೋಡಾ ಮತ್ತು ಡೀನಾ ಬ್ಯಾಂಕುಗಳೊಂದಿಗೆ ವಿಲೀನ ಮಾಡಿರುವುದನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದರು. ಹಾಗೂ ವಿಲೀನಗೊಂಡ ಈ ಬ್ಯಾಂಕ್ ಗೆ “ವಿಜಯಾ ಬ್ಯಾಂಕ್” ಎಂದು ನಾಮಕರಣ ಮಾಡಿ ವಿಜಯಾ ಬ್ಯಾಂಕಿನ ಹೆಸರನ್ನು ಉಳಿಸಿಕೊಡುವಂತೆ ಸಂಸದರು ಸಚಿವರಿಗೆ ಮನವಿ ಮಾಡಿದರು. ಸಂಸದರ ಮನವಿಗೆ ಮಾನ್ಯ ಹಣಕಾಸು ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದು ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿರುತ್ತಾರೆ.

7th-news

Highslide for Wordpress Plugin