Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಶ್ರೀ ಕೇಶವಕೃಪಾ ವೇದ ಶಿಬಿರಕ್ಕೆ ಭೇಟಿ

ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ವೇದ ಶಿಬಿರಕ್ಕೆ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಶಿಬಿರಾರ್ಥಿಗಳು ಜಯಘೋಷದೊಂದಿಗೆ ಶುಭ ಹಾರೈಸಿದರು.

ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ದಂಪತಿಗಳು ಶಾಲು ಹೊದಿಸಿ ಸಂಸದರನ್ನು ಸನ್ಮಾನಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ನಳಿನ್‌ಕುಮಾರ್  ದೇಶದ ಸತ್ಪ್ರಜೆಗಳಾಗಿ ಬಲಿಷ್ಠ, ಸದೃಢ, ರಾಮ ರಾಜ್ಯದ ಕನಸನ್ನು ನನಸಾಗಿಸಲು ಎಲ್ಲರೂ ಪ್ರಯತ್ನಿಸೋಣ ಎಂದು ಹೇಳಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಶಾಸಕ ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ವಗೆನಾಡು, ಲಕ್ಷ್ಮೀ ಅಮ್ಮ ವಗೆನಾಡು, ಉಪಸ್ಥಿತರಿದ್ದರು. ಶ್ರೀಯುತ ಪ್ರಕಾಶ್ ಮೂಡಿತ್ತಾಯ ಹಾಗೂ ಪುಟಾಣಿಗಳು ಶಿಬಿರಗೀತೆ ಹಾಡಿದರು. ಶ್ರೀವತ್ಸ ಸಿ.ಎಸ್. ವಿಟ್ಲ ನಿರೂಪಿಸಿ ವಂದಿಸಿದರು.

Highslide for Wordpress Plugin