Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

10ನೇ ವರ್ಷದ ಆಳ್ವಾಸ್ ಪ್ರಗತಿಗೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‍ನಲ್ಲಿ ಎರಡು ದಿನಗಳು ನಡೆಯುವ 10ನೇ ಆವೃತ್ತಿಯ ಅಳ್ವಾಸ್ ಪ್ರಗತಿ- ಬೃಹತ್ ಉದ್ಯೋಗ ಮೇಳಕ್ಕೆ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಆಳ್ವಾಸ್ ಪ್ರಗತಿಗೆ ಚಾಲನೆ ನೀಡಿ ಮಾತನಾಡಿ, ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ನಾಡಿನ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆಳ್ವಾಸ್ ಪ್ರಗತಿ ವರದಾನವಾಗಿದೆ. ಪಾರದರ್ಶಕವಾಗಿ ನಡೆಯುವ ಉದ್ಯೋಗಮೇಳದಿಂದಾಗಿ ಯುವಜನರು ಉದ್ಯೋಗ ಪಡೆಯಲು ಬೇಕಾದ ಆತ್ಮವಿಶ್ವಾಸವನ್ನು ಹೆಚ್ಚಿಕೊಳ್ಳುತ್ತಿದ್ದಾರೆ. ಕಂಪೆನಿಗಳನ್ನು ಅಭ್ಯರ್ಥಿಗಳಿಗೆ ಮುಂದೆ ತಂದು, ಅವರಿಗೆ ಉದ್ಯೋಗ ಕಲ್ಪಿಸುವ ಈ ವ್ಯವಸ್ಥೆ ಸರ್ಕಾರಕ್ಕೂ ಮಾದರಿ ಎಂದು ಹೇಳಿದರು.

alvas-pragati

alvas-pragati1

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಗುಣಮಟ್ಟದ ಶಿಕ್ಷಣ ಮಾತ್ರವಲ್ಲ, ಔದ್ಯೋಗಿಕವಾಗಿ ಯುವಕರನ್ನು ಸದೃಢಗೊಳಿಸಲು ಕೆಲಸದಿಂದ, ಸೇವಾಮನೋಭಾವವಾಗಿ ಆಳ್ವಾಸ್ ಪ್ರಗತಿಯನ್ನು 9 ವರ್ಷಗಳ ಹಿಂದೆ ಪ್ರಾರಂಭಿಸಿದ್ದೇವೆ. ಸಹಸ್ರಾರು ಮಂದಿ ಉದ್ಯೋಗ ಪಡೆದಿರುವುದು, ಪಡೆಯುತ್ತಿರುವುದರಿಂದ ನಮ್ಮ ಶ್ರಮ ಸಾರ್ಥಕವಾಗುತ್ತಿದೆ.  ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ಕೆ.ಅಮರನಾಥ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.

ಐಟಿಸಿ ಲಿಮಿಟೆಡ್‍ನ ಸೀನಿಯರ್ ಎಚ್‍ಆರ್ ಮ್ಯಾನೇಜರ್ ಶ್ರೀನಿವಾಸ ರೈ, ಎಂಫಸಿಸ್ ಕಂಪನಿಯ ಸೀನಿಯರ್ ಎಚ್‍ಆರ್ ಮ್ಯಾನೇಜರ್ ವಿದ್ಯಾರಣ್ಯ ಕೊಲ್ಲಿಪಾಲ್, ಯುಎಇ ಎಕ್ಸ್‍ಚೇಂಜ್‍ನ ಎಚ್‍ಆರ್, ಆಳ್ವಾಸ್‍ನ ಹಳೇ ವಿದ್ಯಾರ್ಥಿ ಗಣೇಶ್ ಮೂಡುಬಿದಿರೆ ಅವರನ್ನು ಸನ್ಮಾನಿಸಲಾಯಿತು.

ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಸ್ವಾಗತಿಸಿದರು. ಉಪನ್ಯಾಸಕ ಉದಯ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ವಂದಿಸಿದರು.

Highslide for Wordpress Plugin