Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

30-3-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಜಾತ್ರೋತ್ಸವಕ್ಕೆ ಭೇಟಿ ನೀಡಿದರು.

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶ ಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ನಡೆಯಿತು. ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ,ಸಂಜೀವ ಮಠಂದೂರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ಇಲ್ಲಿ ನಡೆದ ಪೇಜ್ ಪ್ರಮುಖ್ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ಹಾಗೂ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಮಾತನಾಡಿದರು.

ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶ ಅಂಬಿಕ ರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಮೋನಪ್ಪ ಭಂಡಾರಿ, ಪ್ರತಾಪ್ ಸಿಂಹ ನಾಯಕ್, ರವಿಶಂಕರ್, ಸಂತೋಷ್ ಬೊಳಿಯರ್ ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ನೇಕಾರ ವರ್ಗದ ಸಮಾಲೋಚನಾ ಸಭೆಯು ಇಂದು ಅಶೋಕನಗರದ ದೇವಾಂಗ ಸಭಾಭವನದಲ್ಲಿ ನಡೆಯಿತು.

ಪುತ್ತೂರಿನ ಆಸ್ಮೀ ಕಂಫರ್ಟ್ಸ್­ನಲ್ಲಿ ನಡೆದ ಪ್ರಬುದ್ಧರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ರವರು ಸಂವಾದ ಕಾರ್ಯಕ್ರಮ ನಡೆಸಿದರು.

ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಮೊಗೆರ್ನಾಡು ಸಾವಿರ ಸೀಮೆಯ ಶ್ರೀ ಉಳ್ಳಾಲ್ತಿ ಅಮ್ಮನವರ ಮತ್ತು ಅಜ್ವರ ದ್ವವಂಗಳ ವರ್ಷಾವದಿ ಜಾತ್ರಾ ಮಹೋತ್ಸವದಲ್ಲಿ ಮಂಗಳೂರು ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಭಾಗವಹಿಸಿದರು.

Highslide for Wordpress Plugin