Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವರಾದ ಪಿಯೂಶ್ ಗೋಯಲ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ವಿನಂತಿಸಿದರು.

ಪ್ರಮುಖ ಬೇಡಿಕೆಗಳು:

➡  ಮಂಗಳೂರನ್ನು ಪ್ರತ್ಯೇಕ ರೈಲ್ವೇ ವಿಭಾಗ ಮಂಜೂರು ಮಾಡುವುದು.

➡  ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ ನಿರ್ಮಾಣ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ.

➡  ಮಂಗಳೂರು ಕೇಂದ್ರ ರೈಲು ನಿಲ್ದಾಣದ 3ನೇ ಮತ್ತು 4ನೇ ಪ್ಲಾಟ್ ಫಾರಂ ನಿರ್ಮಾಣ ಕಾರ್ಯ ತ್ವರಿತಗೊಳಿಸುವುದು,

➡ ಸುಬ್ರಹ್ಮಣ್ಯ-ಸಕಲೇಶಪುರ ಹಳಿ ದ್ವಿಪಥ ಕಾಮಗಾರಿ ಕೈಗೆತ್ತಿಕೊಳ್ಳುವುದು.

➡ ಮಂಗಳೂರು-ಮಡ್ಗಾಂ ಡೆಮು ರೈಲನ್ನು ಪ್ರತಿನಿತ್ಯ ಓಡಿಸುವುದು.

➡ ದಾದರ್-ಮಡ್ಗಾಂ ಜನ್ ಶತಾಬ್ದಿ ಎಕ್ಸಪ್ರೆಸ್ ರೈಲನ್ನು ಮಂಗಳೂರಿಗೆ ಓಡಿಸುವುದು.

➡ ಗೇಜ್ ಪರಿವರ್ತನೆಯ ಸಂದರ್ಭದಲ್ಲಿ ರದ್ದಾಗಿದ್ದ ಮಂಗಳೂರನ್ನು ಹಾಸನ-ಅರಸೀಕೆರೆ ಮೂಲಕ ಹುಬ್ಬಳ್ಳಿ ಮೀರಜ್.ನ್ನು ಸಂಪರ್ಕಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್­ಪ್ರೆಸ್  ರೈಲನ್ನು ಪುನರಾರಂಭಿಸುವುದು.

➡ ಸುಬ್ರಹ್ಮಣ್ಯ ರೋಡ್ ರೈಲುನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಸೇರಿದಂತೆ

ಇನ್ನೂ ಹಲವು ಬೇಡಿಕೆಗಳನ್ನು ಪೂರೈಸುವಂತೆ ಸಚಿವರಿಗೆ ಸಂಸದರು ಮನವಿ ಮಾಡಿದರು.

with Piyush goel

ಸಂಸದರ ಬೇಡಿಕೆಗಳನ್ನು ಪರಿಶೀಲಿಸಿದ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು ಹಾಗೂ ಮಂಗಳೂರು ಪ್ರತ್ಯೇಕ ರೈಲ್ವೆ ವಿಭಾಗ ರಚನೆಯ ಕುರಿತು ದೆಹಲಿಯಲ್ಲಿ ರೈಲ್ವೇಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಕೂಲಂಕುಶವಾಗಿ ಚರ್ಚಿಸುವುದಾಗಿ ಸಂಸದರಿಗೆ ಸಚಿವರು ಭರವಸೆ ನೀಡಿದರು.

Highslide for Wordpress Plugin