Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಕರ್ನಾಟಕ ಉಪ ಚುನಾವಣೆಯಲ್ಲಿ ಬಿಜೆಪಿಗೆ ಜಯ : ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ

ಸುಭದ್ರ ಕರ್ನಾಟಕ ಸರಕಾರದ ರುವಾರಿ, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾಗಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾನ್ಯ ರಾಜ್ಯಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ಭರತ್ ಶೆಟ್ಟಿ, ಶ್ರೀ ಉಮಾನಾಥ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಕಿಶೋರ್ ರೈ, ಜಗದೀಶ್ ಅಧಿಕಾರಿ, ಶ್ರೀ ಸುದರ್ಶನ್ ಮೂಡಬಿದ್ರೆ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ಶ್ರೀ ರುಕ್ಮಯ ಪೂಜಾರಿ, ಶ್ರೀ ಮೋನಪ್ಪ ಭಂಡಾರಿ, ಶ್ರೀ ಹರಿಕೃಷ್ಣ ಬಂಟ್ವಾಳ್, ಶ್ರೀ ಯೋಗೀಶ್ ಭಟ್, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Highslide for Wordpress Plugin