Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರಿನಲ್ಲಿ ಗಾಂಧಿ ಸಂಕಲ್ಪಯಾತ್ರೆ

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮೋತ್ಸವದ ಪ್ರಯುಕ್ತ ಗಾಂಧಿ ಸಂಕಲ್ಪಯಾತ್ರೆಯನ್ನು ಇಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಗಾಂಧೀಜಿಯವರ ಹಾಗೂ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಶ್ರೀ ಸಂಜೀವ ಮಠಂದೂರು, ಶಾಸಕರುಗಳಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ಎಸ್ ಅಂಗಾರ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Highslide for Wordpress Plugin