Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮೂಡುಬಿದಿರೆ ವಿಗ್ರಹ ಕಳವು: ಸಿಬಿಐಗೆ ನೀಡಲು ನಡೆಸುವ ಸತ್ಯಾಗ್ರಹಕ್ಕೆ ಸಂಸದ ನಳಿನ್ ಬೆಂಬಲ

ಮಂಗಳೂರು : ಮೂಡುಬಿದಿರೆಯ ಸಿದ್ದಾಂತ ದರ್ಶನ ಮಂದಿರದಲ್ಲಿ ನಡೆದ ವಿಗ್ರಹ ಕಳ್ಳತನ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ನಡೆಸಲು ಉದ್ಧೇಶಿಸಿರುವ ಉಪವಾಸ ಸತ್ಯಾಗ್ರಹಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಅ.2 ರಂದು ಬೆಳಗೆ 8.30 ರಿಂದ ಸಂಜೆ 5 ರ ವರೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರಿಗೆ ಬೆಂಬಲ ವ್ಯಕ್ತಪಡಿಸುತ್ತೇನೆ. ಅಲ್ಲದೆ ತಕ್ಷಣ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ. ರಾಜ್ಯ ಸರಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಬೇಕು. ರಾಜ್ಯ ಪೊಲೀಸರಿಗೆ ತನಿಖೆ ನಡೆಸಿ, ನೈಜ ಆರೋಪಿಗಳ ಪತ್ತೆ ಮಾಡಿ ಎಲ್ಲಾ ಮೂರ್ತಿಗಳನ್ನು ವಶಪಡಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತ್ವರಿತ ಪತ್ತೆಗಾಗಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಅಗತ್ಯವಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Highslide for Wordpress Plugin