Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಅ. 7 : ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಜ್ಯಾಧ್ಯಕ್ಷರು

ಮಂಗಳೂರು ದಸರಾ ಹಬ್ಬದ ಪ್ರಯುಕ್ತ ಇಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗು ದಕ್ಷಿಣಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ, ಮಂಗಳೂರು ದಸರಾದ ರೂವಾರಿ ಶ್ರೀಯುತ ಜನಾರ್ಧನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಶ್ರೀ ಹರಿಕೃಷ್ಣ ಬಂಟ್ವಾಳ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

Highslide for Wordpress Plugin