Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಜಕೀಯ ಪ್ರೇರಿತ ಐಟಿ ದಾಳಿ : ನಳಿನ್ ಕುಮಾರ್ ಕಟೀಲ್

ಮಂಗಳೂರು : ಮಠ, ಮಂದಿರಗಳು ಸಮಾಜಕ್ಕೆ ಅಪಾರ ಕೊಡುಗೆ ನೀಡುತ್ತಿದ್ದು, ಅವುಗಳು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸುವ ಮೂಲಕ ಸರಕಾರ ಮಠಗಳ ವಿರುದ್ಧ ಸಮರ ಸಾರಲು ಮುಂದಾಗಿವೆ. ಇಂತಹ ದುರುದ್ದೇಶಪೂರಿಕ, ರಾಜಕೀಯ ಪ್ರೇರಿತವಾಗಿ ಸರಕಾರ ಕಾರ್ಯನಿರ್ವಹಿಸುವುದು ಸರಿಯಲ್ಲ ಎಂದು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜಿಎಸ್ ಮೆಡಿಕಲ್ ಕಾಲೇಜಿನ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿ ದುರುದ್ದೇಶಪೂರಿತ ಹಾಗೂ ರಾಜಕೀಯ ಪ್ರೇರಿತವಾಗಿದೆ. ಮಠಗಳನ್ನು ರಕ್ಷಿಸುವ ಹಾಗೂ ಪೋಷಿಸುವ ಕೆಲಸವನ್ನು ಸರಕಾರ ಮಾಡಬೇಕಾಗಿದೆ. ಅವುಗಳು ನಡೆಸುವ ಜನಪರ ಕೆಲಸಗಳಿಗೆ ಈ ರೀತಿಯಲ್ಲಿ ಕಿರುಕುಳ ನೀಡುವುದು ಸರಿಯಲ್ಲ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಶ್ರೀ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Highslide for Wordpress Plugin